24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!