25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya
error: Content is protected !!