23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

ಬೆಳ್ತಂಗಡಿ: ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು ಮನೆಯವರನ್ನು ವಂಚಿಸುವ ಪ್ರಯತ್ನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಳ ತಂದೆ ಸುರೇಂದ್ರನ್ ಆರೋಪಿಸಿದ್ದಾರೆ.

ಆಕಾಂಕ್ಷ ಸಾವನ್ನಪ್ಪಿದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ತಂದೆ ಹಾಗೂ ಮನೆಯವರು ಪೊಲೀಸರಿಗೆ ದೂರು ನೀಡಿ ತಮ್ಮ ಮಗಳ ಅಹಜ ಸಾವಿನ ಬಗ್ಗೆ ಅನುಮಾನವಿದ್ದು ಈ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ದೂರನ್ನು ನೀಡಿದ್ದರು.

ಆದರೆ ಸೋಮವಾರ ಸುರೇಂದ್ರನ್ ಅವರ ಕೈಗೆ ಸ್ಥಳೀಯ ಪೊಲೀಸರು ಎಫ್.ಐ.ಆ‌ರ್ ಪ್ರತಿಯನ್ನು ನೀಡಿದ್ದಾರೆ. ಸ್ಥಳೀಯ ಪಂಜಾಬಿ ಭಾಷೆಯಲ್ಲಿದ್ದ ಈ ಎಫ್.ಐ.ಆರ್ ವರದಿಯನ್ನು ಸ್ಥಳೀಯರ ಸಹಕಾರದಿಂದ ಓದಿ ತಿಳಿದಕೊಂಡಾಗ ಅದರಲ್ಲಿ ತನ್ನ ಮಗಳ ಸಾವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಖಿನ್ನತೆಗೆ ಒಳಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದಾಖಲಿಸಿರುವುದು ತಿಳಿದು ಬಂದಿದೆ.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮನೆಯವರು ಇದನ್ನು ಒಪ್ಪಲು ಸಾಧ್ಯವಿಲ್ಲ. ನಾವು ನೀಡಿರುವ ದೂರಿನಂತೆಯೇ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಇದಾದ ಬಳಿಕ ಇದೀಗ ಮತ್ತೆ ಮೃತಳ ತಂದೆ ಸುರೇಂದ್ರ ಅವರಿಂದ ಮತ್ತೊಂದು ದೂರನ್ನು ಪಡೆದುಕೊಂಡಿದ್ದಾರೆ.

ಈ ದೂರಿನಲ್ಲಿ ತಮಗೆ ಮಗಳ ಸಾವಿಗೆ ಸಂಸ್ಥೆಯಲ್ಲಿ ಪ್ರಾಧ್ಯಾಪಕನಾಗಿರುವ ಮ್ಯಾಥ್ಯ ಕಾರಣನಾಗಿದ್ದಾನೆ ಎಂದು ತಿಳಿಸಿದ್ದಾರೆ.
ಇದೀಗ ಆಕಾಂಕ್ಷ ತಂದೆ ತಿಳಿಸುವ ಮಾಹಿತಿಯಂತೆ ಕಾಲೇಜಿನ ಸಿ.ಸಿ ಕ್ಯಾಮರಾ ಪುಟೇಜ್ ಗಳನ್ನು ಸರಿಯಾಗಿ ನೀಡುತ್ತಿಲ್ಲ. ಕೇವಲ ಆಕೆ ಕೆಳಗೆ ಬೀಳುವ ದೃಶ್ಯಗಳನ್ನು ಮಾತ್ರ ತೋರಿಸಲಾಗುತ್ತಿದೆ. ಆಕೆ ಹೇಗೆ ಕೆಳಗೆ ಬಿದ್ದಳು ಯಾರಾದರೂ ದೂಡಿರುವುದಾ ಅಥವಾ ಆಕೆ ಹಾರಿರುವುದಾ ಎಂದು ಎಲ್ಲಿಯೂ ಕಾಣಿಸುತ್ತಿಲ್ಲ. ಸಿ.ಸಿ.ಕ್ಯಾಮರದ ಪೂರ್ಣ ದಾಖಲೆಗಳನ್ನು ತೋರಿಸುವಂತೆ ಕೇಳಿದರೆ ಅದನ್ನು ನೀಡಲು ಸಿದ್ದರಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಆರಂಭದಲ್ಲಿ ತನಿಖೆಯ ಭರವಸೆ ನೀಡಿದ್ದ ಪೊಲೀಸರು ಇದೀಗ ತಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸುತ್ತಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಭರವಸೆ ನೀಡಿರುವುದಾಗಿ ತಿಳಿಸಿದ ಅವರು ಇದೀಗ ಎರಡನೇ ಬಾರಿಗೆ ದೂರನ್ನು ಪೊಲೀಸರು ಸ್ವೀಕರಿಸಿದ್ದು ಯಾವರೀತಿ ಪ್ರಕರಣ ದಾಖಲಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.ಪ್ರಕರಣ ದಾಖಲಿಸುವ ಬಗ್ಗೆ ಇರುವ ಗೊಂದಲದಿಂದಾಗಿ ಇನ್ನೂ ಮರಣೋತ್ತರ ಪರೀಕ್ಷೆ ನಡೆದಿಲ್ಲ ಎಂದು ವರದಿಯಾಗಿದೆ.

Related posts

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!