23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya
error: Content is protected !!