30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!