July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya
error: Content is protected !!