23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya
error: Content is protected !!