September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!