22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲದಲ್ಲಿ ಮೇ 13ರಿಂದ ಪ್ರಾರಂಭಗೊಂಡು ಮೇ 21 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಜರುಗಲಿದೆ.

ಮೇ 18 ರಂದು ಅಂಗಣೋತ್ಸವ, ರಾತ್ರಿ “ಮಹಾ ರಥೋತ್ಸವ”, ಕವಾಟ ಬಂಧನ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ಶ್ರೀನಿವಾಸ ಮೂಡೆತ್ತಾಯ ಮತ್ತು ಉತ್ಸವ ಸಮಿತಿ ಸದಸ್ಯರು, ಆಡಳಿತಾಧಿಕಾರಿ ದಿನೇಶ್ ಎಂ.
, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು (ಮೇ 19 ) ಪೂರ್ವಾಹ್ನ ಕವಾಟೋದ್ಘಾಟನೆ, ಮಹಾಪೂಜೆ ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭ್ರತೋತ್ಸವ, ಧ್ವಜ ಅವರೋಹಣ, ಪೂರ್ವಾಹ್ನ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ. ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮೋತ್ಸವ ನಡೆಯಲಿದೆ.

Related posts

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!