July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

ಓಡಿಲ್ನಾಳ : ಇಲ್ಲಿಯ ಪಣೆಜಾಲು, ವೃಕ್ಷ ಮನೆಯ ಕೆನರಾ ಬ್ಯಾಂಕಿನ ನಿವೃತ್ತ ಪ್ರಬಂಧಕ ರಾಮಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಶ್ರೀ ಸತ್ಯನಾರಾಯಣ ಸ್ವಾಮಿ ದೇವರ ಪೂಜೆಯ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಕು| ಪ್ರಾರ್ಥನಾ ಪೂಜಾರಿಗೆ ಅರ್ಚಕರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಹಿರಿಯರಾದ ಜನಾರ್ಧನ ಪೂಜಾರಿ ಗೇರುಕಟ್ಟೆ, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪ್ರೊ| ಎ ಕೃಷ್ಣಪ್ಪ ಪೂಜಾರಿ, ಕೆ ರಮೇಶ ಬಂಗೇರ, ಶ್ರೀಮತಿ ವಿನೋದಿನಿ ರಾಮಪ್ಪ, ತುಕರಾಮ ಪೂಜಾರಿ ಶ್ರೀಮತಿ ಶಾಂಭವಿ ಬಂಗೇರ, ಶ್ರೀಮತಿ ನಿರೂಪ ಬಾನು, ಜೈ ವಿಕ್ರಂ ಕಲ್ಲಾಪು, ಎಂ ಕೆ ಪ್ರಸಾದ್, ಸಂತೋಷ್ ಕಾಪಿನಾಡ್ಕ, ನಿತೀಶ್ ವೇಣೂರು, ಪ್ರಾರ್ಥನಾ ರವರ ತಾಯಿ ಶ್ರೀಮತಿ ಕುಶಲ ತಂದೆ ಹರಿಶ್ಚಂದ್ರ ಕೇರಿಯ ಹಾಗೂ ಇತರ ಗಣ್ಯರು ಹಾಜರಿದ್ದರು.

Related posts

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya
error: Content is protected !!