25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
error: Content is protected !!