September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

ಮಾಲಾಡಿ: ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಮೇ 12 ರಂದು ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಪವಿತ್ರ ಬುದ್ಧ ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ‌

ಬೌದ್ಧ ಮಹಾಸಭಾದ ಅಧ್ಯಕ್ಷ ಸುನೀಲ್ ಮಾಲಾಡಿ ಹಾಗೂ ಅದೇ ದಿನ 25 ನೇ ವರ್ಷದ ಮದುವೆ ದಿನದ ಸಂಭ್ರಮದಲ್ಲಿದ್ದ ಗುಲಾಬಿ ಆನಂದ ದಂಪತಿಗಳು ಭಗವಾನ್ ಬುದ್ಧನ ಮೂರ್ತಿಯ ಎದುರು ಕ್ಯಾಂಡಲ್ ಉರಿಸಿ ಚಾಲನೆ ನೀಡಿದರು. ಹಿರಿಯರಾದ ಬಿ.ಕೆ.ಚೆನ್ನಪ್ಪ ಹಾಗೂ ಕೇಶವ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.‌

ಕಿರಿಯರಾದ ಪ್ರಣಮ್ ಶರಣ್ ಸುಜ್ನಾತ್ ಹಾಗೂ ಶ್ರವಣ್ ದೀಪ ಬೆಳಗಿಸಿದರು.‌ ಬಳಿಕ ಹಿರಿಯ ಉಪಾಸಕರಾದ ಬಾಬಿ ಮಡಂತ್ಯಾರು ಇವರು ಬುದ್ಧವಂದನೆ, ಧಮ್ಮವಂದನೆ ಹಾಗೂ ಸಂಘವಂದನೆಯನ್ನು ನಡೆಸಿಕೊಟ್ಟರು. ಸುಕೇಶ್ ಕೆ ಸ್ವಾಗತಿಸಿದರು.

Related posts

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya
error: Content is protected !!