25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

ಲಾಯಿಲ: ಇಲ್ಲಿಯ ಬಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ನೀರಿನಲ್ಲಿ ಬಾಳೆ ಎಲೆ, ಹೂ ಸಹಿತ ಪೂಜೆಗೆ ಬಳಸಿದ ವಸ್ತುಗಳು ಮೇ.18 ರಂದು ಕಂಡು ಬಂದಿದೆ.

ಇದರಿಂದ ಸ್ಥಳೀಯರು ಭಯಭೀತಗೊಂಡಿದ್ದರು. ಅದರೆ ಇದು ಸುಳ್ಳು ಸುದ್ದಿಯಾಗಿದ್ದು ವಾಸ್ತವವಾಗಿ ವಾಮಾಚಾರ ಮಾಡಿದ್ದಲ್ಲ ಸ್ಥಳೀಯ ಮನೆಯವರು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೋಷ ಪರಿಹಾರಕ್ಕಾಗಿ ಮಾಡಿದ ಪೂಜೆಯ ವಸ್ತುಗಳನ್ನು ಬಿಸಾಕಲಾಗಿದ್ದು. ಇದನ್ನೇ ತಪ್ಪಾಗಿ ಬಿಂಬಿಸಿ ವಾಮಾಚಾರ ಎಂದು ತಪ್ಪು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ. ಇಲ್ಲಿ ಯಾವುದೇ ವಾಮಾಚಾರ ನಡೆದಿಲ್ಲ ಸಾರ್ವಜನಿಕರು ಸುಳ್ಳು ಸುದ್ದಿಯಿಂದ ಭಯಪಡದೇ ತಪ್ಪು ಅರ್ಥೈಸಿಕೊಳ್ಳಬಾರದು ಎಂದು ಸ್ಥಳೀಯರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ಇಂತಹ ಸೂಕ್ಷ್ಮ ವಿಷಯಗಳನ್ನು ಸರಿಯಾಗಿ ಪರಿಶೀಲಿಸದೇ ಸುಳ್ಳು ಸುದ್ದಿಗಳನ್ನು ವೈರಲ್ ಮಾಡಬಾರದು, ಇದರಿಂದ ಜನರು ಭಯಭೀತರಾಗಿ ಆತಂಕಕ್ಕೊಳಗಾಗುತ್ತಾರೆ. ಒಂದು ವೇಳೆ ಗಮನಕ್ಕೂ ಬಂದರೂ ಪಂಚಾಯತ್ ಅಥವಾ ಸ್ಥಳೀಯ ಜನಪ್ರತಿನಿಧಿಗಳ, ಪೊಲೀಸರ  ಗಮನಕ್ಕೆ ತರುವಂತೆ ವಿನಂತಿಸಿದ್ದಾರೆ.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!