March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ನಾನಾ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಮೇ 19ರ ತಡ ರಾತ್ರಿಯಿಂದ ಮಳೆ ಸುರಿದಿದೆ. ಇನ್ನೂ ಮೇ 20 ರಂದು ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಬಂಟ್ವಾಳ, ಸುಳ್ಯ, ಪುತ್ತೂರು, ತಾಲೂಕು ಸೇರಿದ್ದಂತೆ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ಮಳೆಯಾಗಿದೆ.

ಆರೆಂಜ್ ಅಲರ್ಟ್ ಘೋಷಣೆ:
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 21ರಿಂದ 23 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ದೋಣಿಗಳು ದಡ ಸೇರುವಂತೆ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸೂಚನೆ ನೀಡಿದೆ. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳಬಾರದು ಎಂದು ತಿಳಿಸಿದೆ.

ಬೆಳಗ್ಗೆ ಮಳೆ ಸುರಿದ ಪರಿಣಾಮ ವಿದ್ಯಾರ್ಥಿಗಳು ಉದ್ಯೋಗಿಗಳು ಮಳೆಗೆ ಒದ್ದೆಯಾದ ದೃಶ್ಯ ಕಂಡು ಬಂತು. ರಸ್ತೆಯಲ್ಲಿ ಮಳೆಯ ನೀರು ಚರಂಡಿ ವ್ಯವಸ್ಥೆ ಇಲ್ಲದೆ ಹರಿಯಿತು. ಇನ್ನೇನು ಕೆಲವು ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು ಸಂಬಂಧಪಟ್ಟ ಇಲಾಖೆಗಳು ಚರಂಡಿ ದುರಸ್ತಿಗೊಳಿಸಬೇಕು ಎಂಬುವುದು ಸಾರ್ವಜನಿಕರ ಒತ್ತಾಯ.

Related posts

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!