22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವತಿಯಿಂದ ನಿವೃತ್ತ ಶಿಕ್ಷರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭವು ಮೇ 20ರಂದು ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಾರತೀಯ ಜೀವ ನಿಗಮ ಪ್ರಬಂಧಕ ಕೆ. ಪ್ರಕಾಶ್ ಭಾಗವಹಿಸಿದ್ದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ನಿರ್ದೇಶಕ ಧರಣೇಂದ್ರ ಕೆ. ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ, ನಿವೃತ್ತ ಶಿಕ್ಷಕರಾದ ಪಂಚಾಕ್ಷರಪ್ಪ, ಸೀತಾರಾಮ ಗೌಡ, ಕೃಷ್ಣಪ್ಪ ನಾಯ್ಕ, ವಿದ್ಯಾ ಕುಮಾರಿ ಪಿ, ಲಿಯೋ ನೋರನ್ಹ ರವರನ್ನು ಹಾಗೂ ಬ್ಯಾಂಕಿನ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ವೇದಿಕೆಯಲ್ಲಿ ವಸೂಲಾತಿ ಅಧಿಕಾರಿ ನವೀನ್ ಶೆಟ್ಟಿ, ಶಾಖ ಪ್ರಬಂಧಕ ಚೇತನ್ ಕುಮಾರ್ ಉಪಸ್ಥಿತರಿದ್ದರು.

ನಿರ್ದೇಶಕ ಧರಣೇಂದ್ರ ಕೆ. ಜೈನ್ ನಿರೂಪಿಸಿದರು. ಸಿಬ್ಬಂದಿ ಸಂಧ್ಯಾ ಮತ್ತು ಬಳಗ ಪ್ರಾರ್ಥಿಸಿದರು. ನಿವೃತ್ತ ಪ್ರಬಂಧಕ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿ ವಂದಿಸಿದರು.

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!