September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವತಿಯಿಂದ ನಿವೃತ್ತ ಶಿಕ್ಷರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭವು ಮೇ 20ರಂದು ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಾರತೀಯ ಜೀವ ನಿಗಮ ಪ್ರಬಂಧಕ ಕೆ. ಪ್ರಕಾಶ್ ಭಾಗವಹಿಸಿದ್ದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ನಿರ್ದೇಶಕ ಧರಣೇಂದ್ರ ಕೆ. ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ, ನಿವೃತ್ತ ಶಿಕ್ಷಕರಾದ ಪಂಚಾಕ್ಷರಪ್ಪ, ಸೀತಾರಾಮ ಗೌಡ, ಕೃಷ್ಣಪ್ಪ ನಾಯ್ಕ, ವಿದ್ಯಾ ಕುಮಾರಿ ಪಿ, ಲಿಯೋ ನೋರನ್ಹ ರವರನ್ನು ಹಾಗೂ ಬ್ಯಾಂಕಿನ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ವೇದಿಕೆಯಲ್ಲಿ ವಸೂಲಾತಿ ಅಧಿಕಾರಿ ನವೀನ್ ಶೆಟ್ಟಿ, ಶಾಖ ಪ್ರಬಂಧಕ ಚೇತನ್ ಕುಮಾರ್ ಉಪಸ್ಥಿತರಿದ್ದರು.

ನಿರ್ದೇಶಕ ಧರಣೇಂದ್ರ ಕೆ. ಜೈನ್ ನಿರೂಪಿಸಿದರು. ಸಿಬ್ಬಂದಿ ಸಂಧ್ಯಾ ಮತ್ತು ಬಳಗ ಪ್ರಾರ್ಥಿಸಿದರು. ನಿವೃತ್ತ ಪ್ರಬಂಧಕ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿ ವಂದಿಸಿದರು.

Related posts

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya
error: Content is protected !!