24.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

ಕುವೆಟ್ಟು: ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಕಳೆದ 2 ವರ್ಷ ಅವಧಿಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ಅವರನ್ನು ಮದ್ದಡ್ಕ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಊರ ಹಿತೈಷಿಗಳಿಂದ ಪ್ರೀತಿಯ ಗೌರವಾರ್ಪಣೆ ಕಾರ್ಯಕ್ರಮ ಮೇ 20 ರoದು ಜರಗಿತು.

ಈ ಸಂದರ್ಭದಲ್ಲಿ ಗೌರವಾರ್ಪಣೆಯನ್ನು ಸ್ವೀಕರಿಸಿದ ಸುಧೀರ್ ನಾಯ್ಕ್ ಮಾತನಾಡಿ ನನ್ನ 2 ವರ್ಷದ ಅವಧಿಯಲ್ಲಿ ಮದ್ದಡ್ಕ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದ ಗ್ರಾಹಕರಿಗೆ ಹಾಗೂ ಉತ್ತಮ ಸೇವೆಯನ್ನು ನೀಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಾಖೆಯ ಮೆನೇಜರ್ ರಾಧಾ ಕೆಕೆ., ಸಿಬ್ಬಂದಿಗಳಾದ ರಾಧಾಕೃಷ್ಣ ಭಟ್, ಶರಲ್ ಪಿಂಟೋ, ರೇವತಿ, ಸುಕೇಶ್, ಚೇತನ್, ಧರ್ಮಶ್ರೀ ಸಂಕೀರ್ಣದ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿವೇಕಾನಂದ ಶೆಣೈ, ಗಣೇಶ್ ಶೆಟ್ಟಿ ಅರ್ಕಜೆ, ಅಬ್ಬೋನ್ ಮದ್ದಡ್ಕ ,ಶೇಖರ್ ಶೆಟ್ಟಿ, ಯೋಗಿಶ್ ಶೆಟ್ಟಿ ಅನಿಲ , ವಿಜಯ ಸಾಲ್ಯಾನ್, ಉಮೇಶ್ ಮದ್ದಡ್ಕ, ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!