23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

ಬೆಳ್ತಂಗಡಿ: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್ ನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ, ಅಳದಂಗಡಿ ಸತ್ಯದೇವತೆ ಎಂಟರ್ ಪ್ರೈಸಸ್ ಮಾಲಕ, ಗುರಿಕಾರ ಜಗದೀಶ್ ಪೂಜಾರಿ ಪೆರಾಜೆ ಇವರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ‌.

ಕಳೆದೊಂದು ದಿನದ ಹಿಂದೆ ಮೇ 19 ರಂದು ಕಾಪಿನಡ್ಕದ ಯುವಕ ರಾಕೇಶ್ ಎಂಬವರ ಸುಮಾರು‌ ಎರಡು ಲಕ್ಷ ಮೊತ್ತದ ಚಿನ್ನದ ಬ್ರಾಸ್ ಲೈಟ್‌ ಬೆಳಿಗ್ಗೆ ಕಾರ್ಯಕ್ರಮಕ್ಕೆ ತೆರಳುವಾಗ ಕಳೆದು ಹೋಗಿತ್ತು.ಅವರು ಬಳಂಜ, ಗುರುವಾಯನಕೆರೆ, ಪಡಂಗಡಿ, ಮಡಂತ್ಯಾರು ಕಡೆ ಹುಡುಕಿದರು ಸಿಗಲಿಲ್ಲ.ಬ್ರಾಸ್ ಲೈಟ್ ಕಳೆದು ಹೋದ ಬಗ್ಗೆ ಸೋಶಿಯಲ್ ಮಿಡೀಯಾದಲ್ಲಿ ಹಾಕಿದ್ದರು. ಬಳಂಜದ ಯುವಕ ಜಗದೀಶ್ ಅವರು ಗೃಹಪ್ರವೇಶ ಕಾರ್ಯಕ್ರಮಕ್ಕೆ ತನ್ನ ತಾಯಿ ಜೊತೆ ಹೋಗಿ ರಾತ್ರಿ 8 ಗಂಟೆ ಸಮಯಕ್ಕೆ ಹಿಂತಿರುಗಿ ಬರುವಾಗ ಕಾಪಿನಡ್ಕ ರಸ್ತೆಯಲ್ಲಿ ಚಿನ್ನದ ಬ್ರಾಸ್ ಲೈಟ್ ಸಿಕ್ಕಿದೆ. ಕೂಡಲೇ ಕಾರಿಂದಿಳಿದು ಬ್ರಾಸ್ ಲೈಟ್ ತೆಗೆದುಕೊಂಡು ಮನೆಗೆ ಬಂದು ವಿಚಾರಿಸಿದಾಗ ಅದು ರಾಕೇಶ್ ಕಾಪಿನಡ್ಕದವರದೆಂದು ಗೊತ್ತಾಯಿತು. ಕೂಡಲೇ ಜಗದೀಶ್ ಅವರು ಅವರ ಮನೆಗೆ ತೆರಳಿ ಬ್ರಾಸ್ ಲೈಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು.

ಮನೆಯವರು ಅತ್ಯಂತ ಸಂತೋಷದಿಂದ ಜಗದೀಶ್ ಅವರ ಪ್ರಾಮಾಣಿಕತೆಯನ್ನು ಮೆಚ್ಚಿ ಇಂದಿನ ಕಾಲದಲ್ಲಿಯೂ ಇಂತಹ ವ್ಯಕ್ತಿಗಳು ಇರುವಂತದ್ದು ಭಾರಿ ವಿರಳ. ದೈವ ದೇವರ ಅನುಗ್ರಹ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.

Related posts

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
error: Content is protected !!