September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

ಬೆಳ್ತಂಗಡಿ: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್ ನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ, ಅಳದಂಗಡಿ ಸತ್ಯದೇವತೆ ಎಂಟರ್ ಪ್ರೈಸಸ್ ಮಾಲಕ, ಗುರಿಕಾರ ಜಗದೀಶ್ ಪೂಜಾರಿ ಪೆರಾಜೆ ಇವರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ‌.

ಕಳೆದೊಂದು ದಿನದ ಹಿಂದೆ ಮೇ 19 ರಂದು ಕಾಪಿನಡ್ಕದ ಯುವಕ ರಾಕೇಶ್ ಎಂಬವರ ಸುಮಾರು‌ ಎರಡು ಲಕ್ಷ ಮೊತ್ತದ ಚಿನ್ನದ ಬ್ರಾಸ್ ಲೈಟ್‌ ಬೆಳಿಗ್ಗೆ ಕಾರ್ಯಕ್ರಮಕ್ಕೆ ತೆರಳುವಾಗ ಕಳೆದು ಹೋಗಿತ್ತು.ಅವರು ಬಳಂಜ, ಗುರುವಾಯನಕೆರೆ, ಪಡಂಗಡಿ, ಮಡಂತ್ಯಾರು ಕಡೆ ಹುಡುಕಿದರು ಸಿಗಲಿಲ್ಲ.ಬ್ರಾಸ್ ಲೈಟ್ ಕಳೆದು ಹೋದ ಬಗ್ಗೆ ಸೋಶಿಯಲ್ ಮಿಡೀಯಾದಲ್ಲಿ ಹಾಕಿದ್ದರು. ಬಳಂಜದ ಯುವಕ ಜಗದೀಶ್ ಅವರು ಗೃಹಪ್ರವೇಶ ಕಾರ್ಯಕ್ರಮಕ್ಕೆ ತನ್ನ ತಾಯಿ ಜೊತೆ ಹೋಗಿ ರಾತ್ರಿ 8 ಗಂಟೆ ಸಮಯಕ್ಕೆ ಹಿಂತಿರುಗಿ ಬರುವಾಗ ಕಾಪಿನಡ್ಕ ರಸ್ತೆಯಲ್ಲಿ ಚಿನ್ನದ ಬ್ರಾಸ್ ಲೈಟ್ ಸಿಕ್ಕಿದೆ. ಕೂಡಲೇ ಕಾರಿಂದಿಳಿದು ಬ್ರಾಸ್ ಲೈಟ್ ತೆಗೆದುಕೊಂಡು ಮನೆಗೆ ಬಂದು ವಿಚಾರಿಸಿದಾಗ ಅದು ರಾಕೇಶ್ ಕಾಪಿನಡ್ಕದವರದೆಂದು ಗೊತ್ತಾಯಿತು. ಕೂಡಲೇ ಜಗದೀಶ್ ಅವರು ಅವರ ಮನೆಗೆ ತೆರಳಿ ಬ್ರಾಸ್ ಲೈಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು.

ಮನೆಯವರು ಅತ್ಯಂತ ಸಂತೋಷದಿಂದ ಜಗದೀಶ್ ಅವರ ಪ್ರಾಮಾಣಿಕತೆಯನ್ನು ಮೆಚ್ಚಿ ಇಂದಿನ ಕಾಲದಲ್ಲಿಯೂ ಇಂತಹ ವ್ಯಕ್ತಿಗಳು ಇರುವಂತದ್ದು ಭಾರಿ ವಿರಳ. ದೈವ ದೇವರ ಅನುಗ್ರಹ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.

Related posts

ವಿ.ಹಿಂ.ಪ. ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮುಂಡಾಜೆ ಮಂಜುಶ್ರೀ ಭಜನಾಮಂಡಳಿಯಿಂದ ಧನಸಹಾಯ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya
error: Content is protected !!