22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ನಾನಾ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಮೇ 19ರ ತಡ ರಾತ್ರಿಯಿಂದ ಮಳೆ ಸುರಿದಿದೆ. ಇನ್ನೂ ಮೇ 20 ರಂದು ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಬಂಟ್ವಾಳ, ಸುಳ್ಯ, ಪುತ್ತೂರು, ತಾಲೂಕು ಸೇರಿದ್ದಂತೆ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ಮಳೆಯಾಗಿದೆ.

ಆರೆಂಜ್ ಅಲರ್ಟ್ ಘೋಷಣೆ:
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 21ರಿಂದ 23 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ದೋಣಿಗಳು ದಡ ಸೇರುವಂತೆ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸೂಚನೆ ನೀಡಿದೆ. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳಬಾರದು ಎಂದು ತಿಳಿಸಿದೆ.

ಬೆಳಗ್ಗೆ ಮಳೆ ಸುರಿದ ಪರಿಣಾಮ ವಿದ್ಯಾರ್ಥಿಗಳು ಉದ್ಯೋಗಿಗಳು ಮಳೆಗೆ ಒದ್ದೆಯಾದ ದೃಶ್ಯ ಕಂಡು ಬಂತು. ರಸ್ತೆಯಲ್ಲಿ ಮಳೆಯ ನೀರು ಚರಂಡಿ ವ್ಯವಸ್ಥೆ ಇಲ್ಲದೆ ಹರಿಯಿತು. ಇನ್ನೇನು ಕೆಲವು ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು ಸಂಬಂಧಪಟ್ಟ ಇಲಾಖೆಗಳು ಚರಂಡಿ ದುರಸ್ತಿಗೊಳಿಸಬೇಕು ಎಂಬುವುದು ಸಾರ್ವಜನಿಕರ ಒತ್ತಾಯ.

Related posts

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya
error: Content is protected !!