37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವತಿಯಿಂದ ನಿವೃತ್ತ ಶಿಕ್ಷರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭವು ಮೇ 20ರಂದು ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಾರತೀಯ ಜೀವ ನಿಗಮ ಪ್ರಬಂಧಕ ಕೆ. ಪ್ರಕಾಶ್ ಭಾಗವಹಿಸಿದ್ದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ನಿರ್ದೇಶಕ ಧರಣೇಂದ್ರ ಕೆ. ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ, ನಿವೃತ್ತ ಶಿಕ್ಷಕರಾದ ಪಂಚಾಕ್ಷರಪ್ಪ, ಸೀತಾರಾಮ ಗೌಡ, ಕೃಷ್ಣಪ್ಪ ನಾಯ್ಕ, ವಿದ್ಯಾ ಕುಮಾರಿ ಪಿ, ಲಿಯೋ ನೋರನ್ಹ ರವರನ್ನು ಹಾಗೂ ಬ್ಯಾಂಕಿನ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ವೇದಿಕೆಯಲ್ಲಿ ವಸೂಲಾತಿ ಅಧಿಕಾರಿ ನವೀನ್ ಶೆಟ್ಟಿ, ಶಾಖ ಪ್ರಬಂಧಕ ಚೇತನ್ ಕುಮಾರ್ ಉಪಸ್ಥಿತರಿದ್ದರು.

ನಿರ್ದೇಶಕ ಧರಣೇಂದ್ರ ಕೆ. ಜೈನ್ ನಿರೂಪಿಸಿದರು. ಸಿಬ್ಬಂದಿ ಸಂಧ್ಯಾ ಮತ್ತು ಬಳಗ ಪ್ರಾರ್ಥಿಸಿದರು. ನಿವೃತ್ತ ಪ್ರಬಂಧಕ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya
error: Content is protected !!