22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವತಿಯಿಂದ ನಿವೃತ್ತ ಶಿಕ್ಷರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭವು ಮೇ 20ರಂದು ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಾರತೀಯ ಜೀವ ನಿಗಮ ಪ್ರಬಂಧಕ ಕೆ. ಪ್ರಕಾಶ್ ಭಾಗವಹಿಸಿದ್ದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ನಿರ್ದೇಶಕ ಧರಣೇಂದ್ರ ಕೆ. ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ, ನಿವೃತ್ತ ಶಿಕ್ಷಕರಾದ ಪಂಚಾಕ್ಷರಪ್ಪ, ಸೀತಾರಾಮ ಗೌಡ, ಕೃಷ್ಣಪ್ಪ ನಾಯ್ಕ, ವಿದ್ಯಾ ಕುಮಾರಿ ಪಿ, ಲಿಯೋ ನೋರನ್ಹ ರವರನ್ನು ಹಾಗೂ ಬ್ಯಾಂಕಿನ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ವೇದಿಕೆಯಲ್ಲಿ ವಸೂಲಾತಿ ಅಧಿಕಾರಿ ನವೀನ್ ಶೆಟ್ಟಿ, ಶಾಖ ಪ್ರಬಂಧಕ ಚೇತನ್ ಕುಮಾರ್ ಉಪಸ್ಥಿತರಿದ್ದರು.

ನಿರ್ದೇಶಕ ಧರಣೇಂದ್ರ ಕೆ. ಜೈನ್ ನಿರೂಪಿಸಿದರು. ಸಿಬ್ಬಂದಿ ಸಂಧ್ಯಾ ಮತ್ತು ಬಳಗ ಪ್ರಾರ್ಥಿಸಿದರು. ನಿವೃತ್ತ ಪ್ರಬಂಧಕ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿ ವಂದಿಸಿದರು.

Related posts

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya
error: Content is protected !!