24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

ಬೆಳ್ತಂಗಡಿ: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್ ನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ, ಅಳದಂಗಡಿ ಸತ್ಯದೇವತೆ ಎಂಟರ್ ಪ್ರೈಸಸ್ ಮಾಲಕ, ಗುರಿಕಾರ ಜಗದೀಶ್ ಪೂಜಾರಿ ಪೆರಾಜೆ ಇವರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ‌.

ಕಳೆದೊಂದು ದಿನದ ಹಿಂದೆ ಮೇ 19 ರಂದು ಕಾಪಿನಡ್ಕದ ಯುವಕ ರಾಕೇಶ್ ಎಂಬವರ ಸುಮಾರು‌ ಎರಡು ಲಕ್ಷ ಮೊತ್ತದ ಚಿನ್ನದ ಬ್ರಾಸ್ ಲೈಟ್‌ ಬೆಳಿಗ್ಗೆ ಕಾರ್ಯಕ್ರಮಕ್ಕೆ ತೆರಳುವಾಗ ಕಳೆದು ಹೋಗಿತ್ತು.ಅವರು ಬಳಂಜ, ಗುರುವಾಯನಕೆರೆ, ಪಡಂಗಡಿ, ಮಡಂತ್ಯಾರು ಕಡೆ ಹುಡುಕಿದರು ಸಿಗಲಿಲ್ಲ.ಬ್ರಾಸ್ ಲೈಟ್ ಕಳೆದು ಹೋದ ಬಗ್ಗೆ ಸೋಶಿಯಲ್ ಮಿಡೀಯಾದಲ್ಲಿ ಹಾಕಿದ್ದರು. ಬಳಂಜದ ಯುವಕ ಜಗದೀಶ್ ಅವರು ಗೃಹಪ್ರವೇಶ ಕಾರ್ಯಕ್ರಮಕ್ಕೆ ತನ್ನ ತಾಯಿ ಜೊತೆ ಹೋಗಿ ರಾತ್ರಿ 8 ಗಂಟೆ ಸಮಯಕ್ಕೆ ಹಿಂತಿರುಗಿ ಬರುವಾಗ ಕಾಪಿನಡ್ಕ ರಸ್ತೆಯಲ್ಲಿ ಚಿನ್ನದ ಬ್ರಾಸ್ ಲೈಟ್ ಸಿಕ್ಕಿದೆ. ಕೂಡಲೇ ಕಾರಿಂದಿಳಿದು ಬ್ರಾಸ್ ಲೈಟ್ ತೆಗೆದುಕೊಂಡು ಮನೆಗೆ ಬಂದು ವಿಚಾರಿಸಿದಾಗ ಅದು ರಾಕೇಶ್ ಕಾಪಿನಡ್ಕದವರದೆಂದು ಗೊತ್ತಾಯಿತು. ಕೂಡಲೇ ಜಗದೀಶ್ ಅವರು ಅವರ ಮನೆಗೆ ತೆರಳಿ ಬ್ರಾಸ್ ಲೈಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು.

ಮನೆಯವರು ಅತ್ಯಂತ ಸಂತೋಷದಿಂದ ಜಗದೀಶ್ ಅವರ ಪ್ರಾಮಾಣಿಕತೆಯನ್ನು ಮೆಚ್ಚಿ ಇಂದಿನ ಕಾಲದಲ್ಲಿಯೂ ಇಂತಹ ವ್ಯಕ್ತಿಗಳು ಇರುವಂತದ್ದು ಭಾರಿ ವಿರಳ. ದೈವ ದೇವರ ಅನುಗ್ರಹ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!