27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

ಬೆಳ್ತಂಗಡಿ: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್ ನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ, ಅಳದಂಗಡಿ ಸತ್ಯದೇವತೆ ಎಂಟರ್ ಪ್ರೈಸಸ್ ಮಾಲಕ, ಗುರಿಕಾರ ಜಗದೀಶ್ ಪೂಜಾರಿ ಪೆರಾಜೆ ಇವರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ‌.

ಕಳೆದೊಂದು ದಿನದ ಹಿಂದೆ ಮೇ 19 ರಂದು ಕಾಪಿನಡ್ಕದ ಯುವಕ ರಾಕೇಶ್ ಎಂಬವರ ಸುಮಾರು‌ ಎರಡು ಲಕ್ಷ ಮೊತ್ತದ ಚಿನ್ನದ ಬ್ರಾಸ್ ಲೈಟ್‌ ಬೆಳಿಗ್ಗೆ ಕಾರ್ಯಕ್ರಮಕ್ಕೆ ತೆರಳುವಾಗ ಕಳೆದು ಹೋಗಿತ್ತು.ಅವರು ಬಳಂಜ, ಗುರುವಾಯನಕೆರೆ, ಪಡಂಗಡಿ, ಮಡಂತ್ಯಾರು ಕಡೆ ಹುಡುಕಿದರು ಸಿಗಲಿಲ್ಲ.ಬ್ರಾಸ್ ಲೈಟ್ ಕಳೆದು ಹೋದ ಬಗ್ಗೆ ಸೋಶಿಯಲ್ ಮಿಡೀಯಾದಲ್ಲಿ ಹಾಕಿದ್ದರು. ಬಳಂಜದ ಯುವಕ ಜಗದೀಶ್ ಅವರು ಗೃಹಪ್ರವೇಶ ಕಾರ್ಯಕ್ರಮಕ್ಕೆ ತನ್ನ ತಾಯಿ ಜೊತೆ ಹೋಗಿ ರಾತ್ರಿ 8 ಗಂಟೆ ಸಮಯಕ್ಕೆ ಹಿಂತಿರುಗಿ ಬರುವಾಗ ಕಾಪಿನಡ್ಕ ರಸ್ತೆಯಲ್ಲಿ ಚಿನ್ನದ ಬ್ರಾಸ್ ಲೈಟ್ ಸಿಕ್ಕಿದೆ. ಕೂಡಲೇ ಕಾರಿಂದಿಳಿದು ಬ್ರಾಸ್ ಲೈಟ್ ತೆಗೆದುಕೊಂಡು ಮನೆಗೆ ಬಂದು ವಿಚಾರಿಸಿದಾಗ ಅದು ರಾಕೇಶ್ ಕಾಪಿನಡ್ಕದವರದೆಂದು ಗೊತ್ತಾಯಿತು. ಕೂಡಲೇ ಜಗದೀಶ್ ಅವರು ಅವರ ಮನೆಗೆ ತೆರಳಿ ಬ್ರಾಸ್ ಲೈಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು.

ಮನೆಯವರು ಅತ್ಯಂತ ಸಂತೋಷದಿಂದ ಜಗದೀಶ್ ಅವರ ಪ್ರಾಮಾಣಿಕತೆಯನ್ನು ಮೆಚ್ಚಿ ಇಂದಿನ ಕಾಲದಲ್ಲಿಯೂ ಇಂತಹ ವ್ಯಕ್ತಿಗಳು ಇರುವಂತದ್ದು ಭಾರಿ ವಿರಳ. ದೈವ ದೇವರ ಅನುಗ್ರಹ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.

Related posts

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
error: Content is protected !!