23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

ಬೆಳ್ತಂಗಡಿ: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್ ನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ, ಅಳದಂಗಡಿ ಸತ್ಯದೇವತೆ ಎಂಟರ್ ಪ್ರೈಸಸ್ ಮಾಲಕ, ಗುರಿಕಾರ ಜಗದೀಶ್ ಪೂಜಾರಿ ಪೆರಾಜೆ ಇವರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ‌.

ಕಳೆದೊಂದು ದಿನದ ಹಿಂದೆ ಮೇ 19 ರಂದು ಕಾಪಿನಡ್ಕದ ಯುವಕ ರಾಕೇಶ್ ಎಂಬವರ ಸುಮಾರು‌ ಎರಡು ಲಕ್ಷ ಮೊತ್ತದ ಚಿನ್ನದ ಬ್ರಾಸ್ ಲೈಟ್‌ ಬೆಳಿಗ್ಗೆ ಕಾರ್ಯಕ್ರಮಕ್ಕೆ ತೆರಳುವಾಗ ಕಳೆದು ಹೋಗಿತ್ತು.ಅವರು ಬಳಂಜ, ಗುರುವಾಯನಕೆರೆ, ಪಡಂಗಡಿ, ಮಡಂತ್ಯಾರು ಕಡೆ ಹುಡುಕಿದರು ಸಿಗಲಿಲ್ಲ.ಬ್ರಾಸ್ ಲೈಟ್ ಕಳೆದು ಹೋದ ಬಗ್ಗೆ ಸೋಶಿಯಲ್ ಮಿಡೀಯಾದಲ್ಲಿ ಹಾಕಿದ್ದರು. ಬಳಂಜದ ಯುವಕ ಜಗದೀಶ್ ಅವರು ಗೃಹಪ್ರವೇಶ ಕಾರ್ಯಕ್ರಮಕ್ಕೆ ತನ್ನ ತಾಯಿ ಜೊತೆ ಹೋಗಿ ರಾತ್ರಿ 8 ಗಂಟೆ ಸಮಯಕ್ಕೆ ಹಿಂತಿರುಗಿ ಬರುವಾಗ ಕಾಪಿನಡ್ಕ ರಸ್ತೆಯಲ್ಲಿ ಚಿನ್ನದ ಬ್ರಾಸ್ ಲೈಟ್ ಸಿಕ್ಕಿದೆ. ಕೂಡಲೇ ಕಾರಿಂದಿಳಿದು ಬ್ರಾಸ್ ಲೈಟ್ ತೆಗೆದುಕೊಂಡು ಮನೆಗೆ ಬಂದು ವಿಚಾರಿಸಿದಾಗ ಅದು ರಾಕೇಶ್ ಕಾಪಿನಡ್ಕದವರದೆಂದು ಗೊತ್ತಾಯಿತು. ಕೂಡಲೇ ಜಗದೀಶ್ ಅವರು ಅವರ ಮನೆಗೆ ತೆರಳಿ ಬ್ರಾಸ್ ಲೈಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು.

ಮನೆಯವರು ಅತ್ಯಂತ ಸಂತೋಷದಿಂದ ಜಗದೀಶ್ ಅವರ ಪ್ರಾಮಾಣಿಕತೆಯನ್ನು ಮೆಚ್ಚಿ ಇಂದಿನ ಕಾಲದಲ್ಲಿಯೂ ಇಂತಹ ವ್ಯಕ್ತಿಗಳು ಇರುವಂತದ್ದು ಭಾರಿ ವಿರಳ. ದೈವ ದೇವರ ಅನುಗ್ರಹ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.

Related posts

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya
error: Content is protected !!