30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

ಬೆಳ್ತಂಗಡಿ: ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನತೆಗೆ ಉಚಿತ ಗ್ಯಾರಂಟಿಗಳ ಆಮಿಷ ಒಡ್ಡಿ, ಪ್ರಜಾಪ್ರಭುತ್ವ ವಿರೋಧಿ ನೀತಿಯ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ಎರಡು ವರ್ಷ ಪೂರ್ತಿ ಮಾಡುತ್ತಿದೆ. ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿ ಉಚಿತಗಳ ಕಾರಣಕ್ಕೆ ಆರ್ಥಿಕವಾಗಿ ಆಗುವ ಹೊರೆಯ ಮುಂದಾಲೋಚನೆ ಮಾಡದ ಪರಿಣಾಮ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ ಎಂದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಆರೋಪಿಸಿದ್ದಾರೆ.

ಗ್ಯಾರಂಟಿಯ ಆರ್ಥಿಕ ಹೊರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಅಭಿವೃದ್ಧಿ ಶೂನ್ಯಕ್ಕೆ ಕಾರಣ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಳಗೆ ಬಿದ್ದರೂ ಮೀಸೆ ಮಣ್ಣು ಆಗಲ್ಲಿಲ್ಲ ಅಂತ ತಮ್ಮ ಆರ್ಥಿಕ ನೀತಿಯನ್ನು ಎಷ್ಟೇ ಸಮರ್ಥನೆ ಮಾಡಿದರೂ ಜನತೆಗೆ ವಾಸ್ತವ ಅರಿವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಎರಡುವರೆ ಲಕ್ಷ ಕೋಟಿ ಸಾಲ ಪಡೆದು ಅನುತ್ಪಾದಕ ವಿಷಯಗಳಿಗೆ ವೆಚ್ಚ ಮಾಡಿರುವುದೇ ರಾಜ್ಯ ಸರಕಾರದ ಸಾಧನೆ. ಕರ್ನಾಟಕ ದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿ ಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ. ದಿನ ಬೆಳಗಾದರೆ ಹೊಸ ತೆರಿಗೆಯ ಹೊರೆ ಬೆಲೆಏರಿಕೆಯ ಬರೆ ಜನಜೀವನ ದುಸ್ತರ ಗೊಳಿಸಿದೆ. ಆಡಳಿತ ಪಕ್ಷದ ಶಾಸಕರ ಸರಕಾರ ವಿರೋಧಿ ಹೇಳಿಕೆಗಳು ಇದಕ್ಕೆ ಹಿಡಿದ ಕೈಗನ್ನಡಿ ಆಗಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ನೀಡಿದ ಭರವಸೆಯ ವರಸೆ ನೋಡಿದರೆ ರಾಜ್ಯದಲ್ಲಿ ರಾಮರಾಜ್ಯ ನಿರ್ಮಿಸಲಿದ್ದಾರೆ ಎಂದು ಅಂದುಕೊಂಡಿದ್ದೆವು. ಅಭಿವೃದ್ಧಿ ಕೆಲಸ ಮಾಡುತ್ತಾರೆ; ರೈತರ ಕಣ್ಣೀರು ಒರೆಸುತ್ತಾರೆ; ದೀನದಲಿತರ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ, ಅದ್ಯಾವ ಕೆಲಸವನ್ನೂ ಮಾಡಿಲ್ಲ. ಬದಲಾಗಿ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪರಿಶಿಷ್ಟರ ಹಿಂದುಳಿದವರ ಅಭಿವೃದ್ಧಿಗೆ ಇಟ್ಟ ಹಣವನ್ನೇ ನುಂಗಿ ನೀರು ಕುಡಿದ್ದಿದ್ದಾರೆ. ಕಾಂಗ್ರೆಸ್ ಸರಕಾರ ಬ್ರಾಂಡ್ ಬೆಂಗಳೂರನ್ನು ನೀರಲ್ಲಿ ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ಮುಳುಗಿಸಿದೆ.

ರಾಜ್ಯದ ಕಾನೂನು ಪರಿಸ್ಥಿತಿ ಕೋಮಾ ಸ್ಥಿತಿಗೆ ತಲುಪಿದೆ. ಸಮಾಜಘಾತುಕ, ಭಯೋತ್ಪಾದಕ ಶಕ್ತಿಗಳ ವಿಜೃಂಭಣೆ ನೋಡುವಾಗ ಸರಕಾರ ಜೀವಂತ ಇದೆಯೋ ಸತ್ತಿದೆಯೋ ಅನ್ನುವ ಅನುಮಾನ ಬರುತ್ತದೆ. ಗೃಹಮಂತ್ರಿಗಳ ವಿಚಿತ್ರ ಹೇಳಿಕೆಗಳು ಸರಕಾರದ ನಂಪುಸಕತೆಗೆ ಸಾಕ್ಷಿ ಆಗಿದೆ. ಒಟ್ಟಾರೆ ರಾಜ್ಯದ ಕಾಂಗ್ರೆಸ್ ಸರಕಾರದ ಎರಡು ವರ್ಷದ ಆಡಳಿತ ನೋಡುವಾಗ ಯಾಕಾದರೂ ಇವರನ್ನು ಅಧಿಕಾರಕ್ಕೆ ತಂದೆವೋ ಅಂತ ಜನತೆ ಪಶ್ಚತ್ತಾಪ ಪಡುವಂತೆ ಆಗಿದೆ. ಕಾಂಗ್ರೆಸ್ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ಅರ್ಥ ಆಗುತ್ತಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ದಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya
error: Content is protected !!