23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ನಾನಾ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಮೇ 19ರ ತಡ ರಾತ್ರಿಯಿಂದ ಮಳೆ ಸುರಿದಿದೆ. ಇನ್ನೂ ಮೇ 20 ರಂದು ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಬಂಟ್ವಾಳ, ಸುಳ್ಯ, ಪುತ್ತೂರು, ತಾಲೂಕು ಸೇರಿದ್ದಂತೆ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ಮಳೆಯಾಗಿದೆ.

ಆರೆಂಜ್ ಅಲರ್ಟ್ ಘೋಷಣೆ:
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 21ರಿಂದ 23 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ದೋಣಿಗಳು ದಡ ಸೇರುವಂತೆ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸೂಚನೆ ನೀಡಿದೆ. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳಬಾರದು ಎಂದು ತಿಳಿಸಿದೆ.

ಬೆಳಗ್ಗೆ ಮಳೆ ಸುರಿದ ಪರಿಣಾಮ ವಿದ್ಯಾರ್ಥಿಗಳು ಉದ್ಯೋಗಿಗಳು ಮಳೆಗೆ ಒದ್ದೆಯಾದ ದೃಶ್ಯ ಕಂಡು ಬಂತು. ರಸ್ತೆಯಲ್ಲಿ ಮಳೆಯ ನೀರು ಚರಂಡಿ ವ್ಯವಸ್ಥೆ ಇಲ್ಲದೆ ಹರಿಯಿತು. ಇನ್ನೇನು ಕೆಲವು ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು ಸಂಬಂಧಪಟ್ಟ ಇಲಾಖೆಗಳು ಚರಂಡಿ ದುರಸ್ತಿಗೊಳಿಸಬೇಕು ಎಂಬುವುದು ಸಾರ್ವಜನಿಕರ ಒತ್ತಾಯ.

Related posts

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya
error: Content is protected !!