22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆಕಾಂಕ್ಷ ಮೃತದೇಹವನ್ನು ಮೇ.19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು. ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20 ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸಂಸ್ಕಾರ ಮಾಡಲಿದ್ದಾರೆ.

Related posts

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!