September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವತಿಯಿಂದ ನಿವೃತ್ತ ಶಿಕ್ಷರಿಗೆ ಹಾಗೂ ಬ್ಯಾಂಕಿನ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭವು ಮೇ 20ರಂದು ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಾರತೀಯ ಜೀವ ನಿಗಮ ಪ್ರಬಂಧಕ ಕೆ. ಪ್ರಕಾಶ್ ಭಾಗವಹಿಸಿದ್ದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನ ನಿರ್ದೇಶಕ ಧರಣೇಂದ್ರ ಕೆ. ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ, ನಿವೃತ್ತ ಶಿಕ್ಷಕರಾದ ಪಂಚಾಕ್ಷರಪ್ಪ, ಸೀತಾರಾಮ ಗೌಡ, ಕೃಷ್ಣಪ್ಪ ನಾಯ್ಕ, ವಿದ್ಯಾ ಕುಮಾರಿ ಪಿ, ಲಿಯೋ ನೋರನ್ಹ ರವರನ್ನು ಹಾಗೂ ಬ್ಯಾಂಕಿನ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗ್ಡೆ ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ವೇದಿಕೆಯಲ್ಲಿ ವಸೂಲಾತಿ ಅಧಿಕಾರಿ ನವೀನ್ ಶೆಟ್ಟಿ, ಶಾಖ ಪ್ರಬಂಧಕ ಚೇತನ್ ಕುಮಾರ್ ಉಪಸ್ಥಿತರಿದ್ದರು.

ನಿರ್ದೇಶಕ ಧರಣೇಂದ್ರ ಕೆ. ಜೈನ್ ನಿರೂಪಿಸಿದರು. ಸಿಬ್ಬಂದಿ ಸಂಧ್ಯಾ ಮತ್ತು ಬಳಗ ಪ್ರಾರ್ಥಿಸಿದರು. ನಿವೃತ್ತ ಪ್ರಬಂಧಕ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿ ವಂದಿಸಿದರು.

Related posts

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರ ಭೇಟಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!