September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

ಮುಗೇರಡ್ಕ : ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಮೃತ ಮಹೋತ್ಸವದ ಮಹಾತ್ವಕಾಂಕ್ಷಿ ಯೋಜನೆಯಾದ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಶಿಕ್ಷಣ ಪ್ರಾರಂಭಕ್ಕೆ ದಕ್ಷಿಣ ಕನ್ನಡದ ಹಲವು ಅಂಗನವಾಡಿಗಳು ಆಯ್ಕೆಯಾಗಿದ್ದು, ಬೆಳ್ತಂಗಡಿಯ ಮೊಗ್ರು ಗ್ರಾಮದ ಮುಗೇರಡ್ಕ ಅಂಗನವಾಡಿಯೂ ಆಯ್ಕೆಯಾಗಿದೆ ಎಂದು ಬೆಳ್ತಂಗಡಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಸುಮನ ಎಸ್ ಅವರು ಮೊಗ್ರು ಅಂಗನವಾಡಿಯಲ್ಲಿ ನಡೆದ ಬಾಲವಿಕಾಸ ಸಮಿತಿ ಸಭೆಯಲ್ಲಿ ತಿಳಿಸಿದರು.

ಈ ವರ್ಷ ಜೂನ್ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾಗಿ ಅಂಗನವಾಡಿಗಳನ್ನು ಬಲಪಡಿಸುವ ಹಾಗೂ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಇಂಗ್ಲಿಷ್ ಭಾಷಾ ತರಬೇತಿಗೆ ಪೂರಕವಾದ ಎಲ್ ಕೆಜಿ ಗೆ 4 ವರ್ಷದ ಮಕ್ಕಳು ಹಾಗೂ ಯುಕೆಜಿ ಗೆ 5 ವರ್ಷ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು, ಆಯ್ಕೆಯಾದ ಅಂಗನವಾಡಿ ವ್ಯಾಪ್ತಿಯ ಮಕ್ಕಳು ಹಾಗೂ ಹತ್ತಿರದ ಮಕ್ಕಳು ಪ್ರವೇಶ ಪಡೆದು ಇದರ ಸದುಪಯೋಗ ಪಡೆಯಬಹುದು, ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಬೋಧನೆ ಹಾಗೂ ಆಹಾರ ಸರಕಾರದಿಂದ ಉಚಿತವಾಗಿ ಒದಗಿಸಲಾಗುವುದು ಎಂದರು.

ಉಚಿತ ವಾಹನ ವ್ಯವಸ್ಥೆ : ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರಿಂದ ಮೊಗ್ರು ಅಂಗನವಾಡಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಆಯ್ದ ಸ್ಥಳಗಳಿಂದ ಉಚಿತವಾಗಿ ಮಕ್ಕಳ ಪ್ರಯಾಣಕ್ಕೆ ವಾಹನ ವ್ಯವಸ್ಥೆ ಒದಗಿಸಲಾಗುವುದು ಎಂದು ಟ್ರಸ್ಟ್ ಘೋಷಿಸಿದ್ದು, ಇದು ಸರಕಾರಿ ಸೌಲಭ್ಯಗಳನ್ನು ಬಲಪಡಿಸಲು ಟ್ರಸ್ಟ್ ನ ಪ್ರೇರಣೆ ಎಂದರು.

ಸಭೆಯಲ್ಲಿ ಮುಗೇರಡ್ಕ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಭಾರತಿ, ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಸದಸ್ಯರಾದ ವೀರಪ್ಪ ಗೌಡ ಪರಕ್ಕಾಜೆ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಜ್ಯೋತಿ, ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ) ಮೊಗ್ರು ಅಧ್ಯಕ್ಷ ಕುಶಾಲಪ್ಪ ಗೌಡ, ಕಾರ್ಯದರ್ಶಿ ಮನೋಹರ ಗೌಡ ಅಂತರ ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!