23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

ಮುಗೇರಡ್ಕ : ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಮೃತ ಮಹೋತ್ಸವದ ಮಹಾತ್ವಕಾಂಕ್ಷಿ ಯೋಜನೆಯಾದ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಶಿಕ್ಷಣ ಪ್ರಾರಂಭಕ್ಕೆ ದಕ್ಷಿಣ ಕನ್ನಡದ ಹಲವು ಅಂಗನವಾಡಿಗಳು ಆಯ್ಕೆಯಾಗಿದ್ದು, ಬೆಳ್ತಂಗಡಿಯ ಮೊಗ್ರು ಗ್ರಾಮದ ಮುಗೇರಡ್ಕ ಅಂಗನವಾಡಿಯೂ ಆಯ್ಕೆಯಾಗಿದೆ ಎಂದು ಬೆಳ್ತಂಗಡಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಸುಮನ ಎಸ್ ಅವರು ಮೊಗ್ರು ಅಂಗನವಾಡಿಯಲ್ಲಿ ನಡೆದ ಬಾಲವಿಕಾಸ ಸಮಿತಿ ಸಭೆಯಲ್ಲಿ ತಿಳಿಸಿದರು.

ಈ ವರ್ಷ ಜೂನ್ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾಗಿ ಅಂಗನವಾಡಿಗಳನ್ನು ಬಲಪಡಿಸುವ ಹಾಗೂ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಇಂಗ್ಲಿಷ್ ಭಾಷಾ ತರಬೇತಿಗೆ ಪೂರಕವಾದ ಎಲ್ ಕೆಜಿ ಗೆ 4 ವರ್ಷದ ಮಕ್ಕಳು ಹಾಗೂ ಯುಕೆಜಿ ಗೆ 5 ವರ್ಷ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು, ಆಯ್ಕೆಯಾದ ಅಂಗನವಾಡಿ ವ್ಯಾಪ್ತಿಯ ಮಕ್ಕಳು ಹಾಗೂ ಹತ್ತಿರದ ಮಕ್ಕಳು ಪ್ರವೇಶ ಪಡೆದು ಇದರ ಸದುಪಯೋಗ ಪಡೆಯಬಹುದು, ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಬೋಧನೆ ಹಾಗೂ ಆಹಾರ ಸರಕಾರದಿಂದ ಉಚಿತವಾಗಿ ಒದಗಿಸಲಾಗುವುದು ಎಂದರು.

ಉಚಿತ ವಾಹನ ವ್ಯವಸ್ಥೆ : ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರಿಂದ ಮೊಗ್ರು ಅಂಗನವಾಡಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಆಯ್ದ ಸ್ಥಳಗಳಿಂದ ಉಚಿತವಾಗಿ ಮಕ್ಕಳ ಪ್ರಯಾಣಕ್ಕೆ ವಾಹನ ವ್ಯವಸ್ಥೆ ಒದಗಿಸಲಾಗುವುದು ಎಂದು ಟ್ರಸ್ಟ್ ಘೋಷಿಸಿದ್ದು, ಇದು ಸರಕಾರಿ ಸೌಲಭ್ಯಗಳನ್ನು ಬಲಪಡಿಸಲು ಟ್ರಸ್ಟ್ ನ ಪ್ರೇರಣೆ ಎಂದರು.

ಸಭೆಯಲ್ಲಿ ಮುಗೇರಡ್ಕ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಭಾರತಿ, ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಸದಸ್ಯರಾದ ವೀರಪ್ಪ ಗೌಡ ಪರಕ್ಕಾಜೆ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಜ್ಯೋತಿ, ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್(ರಿ) ಮೊಗ್ರು ಅಧ್ಯಕ್ಷ ಕುಶಾಲಪ್ಪ ಗೌಡ, ಕಾರ್ಯದರ್ಶಿ ಮನೋಹರ ಗೌಡ ಅಂತರ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya
error: Content is protected !!