25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

ಬೆಳ್ತಂಗಡಿ: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್ ನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ, ಅಳದಂಗಡಿ ಸತ್ಯದೇವತೆ ಎಂಟರ್ ಪ್ರೈಸಸ್ ಮಾಲಕ, ಗುರಿಕಾರ ಜಗದೀಶ್ ಪೂಜಾರಿ ಪೆರಾಜೆ ಇವರ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ‌.

ಕಳೆದೊಂದು ದಿನದ ಹಿಂದೆ ಮೇ 19 ರಂದು ಕಾಪಿನಡ್ಕದ ಯುವಕ ರಾಕೇಶ್ ಎಂಬವರ ಸುಮಾರು‌ ಎರಡು ಲಕ್ಷ ಮೊತ್ತದ ಚಿನ್ನದ ಬ್ರಾಸ್ ಲೈಟ್‌ ಬೆಳಿಗ್ಗೆ ಕಾರ್ಯಕ್ರಮಕ್ಕೆ ತೆರಳುವಾಗ ಕಳೆದು ಹೋಗಿತ್ತು.ಅವರು ಬಳಂಜ, ಗುರುವಾಯನಕೆರೆ, ಪಡಂಗಡಿ, ಮಡಂತ್ಯಾರು ಕಡೆ ಹುಡುಕಿದರು ಸಿಗಲಿಲ್ಲ.ಬ್ರಾಸ್ ಲೈಟ್ ಕಳೆದು ಹೋದ ಬಗ್ಗೆ ಸೋಶಿಯಲ್ ಮಿಡೀಯಾದಲ್ಲಿ ಹಾಕಿದ್ದರು. ಬಳಂಜದ ಯುವಕ ಜಗದೀಶ್ ಅವರು ಗೃಹಪ್ರವೇಶ ಕಾರ್ಯಕ್ರಮಕ್ಕೆ ತನ್ನ ತಾಯಿ ಜೊತೆ ಹೋಗಿ ರಾತ್ರಿ 8 ಗಂಟೆ ಸಮಯಕ್ಕೆ ಹಿಂತಿರುಗಿ ಬರುವಾಗ ಕಾಪಿನಡ್ಕ ರಸ್ತೆಯಲ್ಲಿ ಚಿನ್ನದ ಬ್ರಾಸ್ ಲೈಟ್ ಸಿಕ್ಕಿದೆ. ಕೂಡಲೇ ಕಾರಿಂದಿಳಿದು ಬ್ರಾಸ್ ಲೈಟ್ ತೆಗೆದುಕೊಂಡು ಮನೆಗೆ ಬಂದು ವಿಚಾರಿಸಿದಾಗ ಅದು ರಾಕೇಶ್ ಕಾಪಿನಡ್ಕದವರದೆಂದು ಗೊತ್ತಾಯಿತು. ಕೂಡಲೇ ಜಗದೀಶ್ ಅವರು ಅವರ ಮನೆಗೆ ತೆರಳಿ ಬ್ರಾಸ್ ಲೈಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು.

ಮನೆಯವರು ಅತ್ಯಂತ ಸಂತೋಷದಿಂದ ಜಗದೀಶ್ ಅವರ ಪ್ರಾಮಾಣಿಕತೆಯನ್ನು ಮೆಚ್ಚಿ ಇಂದಿನ ಕಾಲದಲ್ಲಿಯೂ ಇಂತಹ ವ್ಯಕ್ತಿಗಳು ಇರುವಂತದ್ದು ಭಾರಿ ವಿರಳ. ದೈವ ದೇವರ ಅನುಗ್ರಹ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.

Related posts

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya
error: Content is protected !!