July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಗೇರುಕಟ್ಟೆ: ಕಳಿಯ-ನ್ಯಾಯತರ್ಪು ಹಿಂದೂ ರುದ್ರಭೂಮಿ ಸೇವಾ ಸಮಿತಿ ಹಾಗೂ ಕಳಿಯ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಮೋಕ್ಷಧಾಮ ಲೋಕಾರ್ಪಣಾ ಸಭಾ ಕಾರ್ಯಕ್ರಮ ಮೇ. 21 ರಂದು ಗೇರುಕಟ್ಟೆ ಪೇಟೆಯಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಮೋಕ್ಷಧಾಮ ಲೋಕಾರ್ಪಣೆಗೊಳಿಸಿದರು. ಕಳಿಯ ಗ್ರಾ.ಪಂ.ಅಧ್ಯಕ್ಷ ದಿವಾಕರ ಎಂ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು, ಉದ್ಯಮಿ ಕಿರಣ್‌ಚಂದ್ರ ಡಿ ಪುಷ್ಪಗಿರಿ, ಮಂಗಳೂರು ಜೆ.ಎಂ.ಜೆ.ಕನ್ಟçöಕ್ಷನ್ ಮತ್ತು ಫೈನಾನ್ಸ್ ಜಾನ್ ಸುರೇಶ್, ಬೆಳ್ತಂಗಡಿ ಶ್ರೀ.ಕ್ಷೇತ್ರ.ಧ.ಗ್ರಾ.ಯೋ. ಯೋಜನಾಧಿಕಾರಿ ಯಶೋಧರ ಹಾಗೂ ಪಿಡಿಒ ಸಂತೋಷ್ ಪಾಟೀಲ್ ಸಹಿತ ಮೋದಲಾದವರು ಭಾಗವಹಿಸಿದ್ದರು.

ಕಳಿಯ ಗ್ರಾ.ಪಂ.ಉಪಾಧ್ಯಕ್ಷೆ ಇಂದಿರಾ ಸದಸ್ಯರಾದ ವಿಜಯ ಗೌಡ. ಹರೀಶ್. ಯಶೋಧರ್ ಶೆಟ್ಟಿ. ಸುಭಾಷಿಣಿ. ಕುಸುಮ, ಸುಧಾಕರ್ ಮಜಲು. ಅಬ್ದುಲ್ ಕರೀಂ, ಮರಿಟಾ ಪಿಂಟೊ, ಶ್ವೇತಾ ಶ್ರೀನಿವಾಸ್ , ಕಳಿಯ ಪ್ರಾರ್ಥಮಿಕ ಕೃಷ್ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ. ನಿರ್ದೇಶಕರಾದ ಕೇಶವ ಪೂಜಾರಿ ಹಾಗೂ ಕುಶಾಲಪ್ಪ ಗೌಡ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತುಕಾರಾಮ ಪೂಜಾರಿ, ಹಿಂದೂ ರುದ್ರಭೂಮಿ ಸೇವಾ ಸಮಿತಿ ಅಧ್ಯಕ್ಷ ಕೇಶವ ಬಂಗೇರ .ಉಪಾಧ್ಯಕ್ಷರುಗಳಾದ ಸತೀಶ್ ಶೆಟ್ಟಿ, ನೆಲ್ಲಿಕಟ್ಟೆ, ಉಮೇಶ್ ಶೆಟ್ಟಿ, ಸಂಬೋಳ್ಯ, ಉಮೇಶ್ ಕೇಲ್ದಡ್ಕ, ಪ್ರಕಾಶ್ ಮೇರ್ಲ, ಕಾರ್ಯದರ್ಶಿ ಲೋಕೇಶ್ ಕುಮಾರ್ ಎನ್, ಜೊತೆ ಕಾರ್ಯದರ್ಶಿ ಸತೀಶ್ ಭಂಡಾರಿ ನಾಳ ಹಾಗೂ ರಂಜನ್ ಹೆಚ್. ಕೋಶಾಧಿಕಾರಿ ಶೇಖರ್ ನಾÊಕ್ ಗೇರುಕಟ್ಟೆ, ಪ್ರಧಾನ ಸಂಚಾಲಕರಾದ ಕರುಣಾಕರ ಶೆಟ್ಟಿ ಕೊರಂಜ, ಸಂಚಾಲಕರು ವಸಂತ ಶೆಟ್ಟಿ ಮಾವಿನಕಟ್ಟೆ, ಬಾಲಕೃಷ್ಣ ಗೌಡ, ಬಿರ್ಮೊಟ್ಟು ಹಾಗೂ ಸಾಮಾಜಿಕ ಜಾಲತಾಣ ಪುರಂದರ ಗೇರುಕಟ್ಟೆ ಉಪಸ್ಥಿತರಿದ್ದರು. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಕಳಿಯ-ನ್ಯಾಯತರ್ಪ್ಪು ಗ್ರಾಮಸ್ಥರು ಹಾಜರಿದ್ದರು.

ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಗೊಂಡಿತು. ನ್ಯಾಯತರ್ಪ್ಪು ಗ್ರಾಮ ವ್ಯಾಪ್ತಿಯನ್ನು ಗುರಿಯಾಗಿಸಿ ಕೊಂಡು ಸರಕಾರದ ಅಧೀನದಲ್ಲಿ ಮಂಜೂರಾದ ಅಂದಾಜು ೦.55 ಸೆಂಟ್ಸ್ ಜಾಗದಲ್ಲಿ ಸುಮಾರು 25 ಲಕ್ಷದಲ್ಲಿ ವೆಚ್ಚದಲ್ಲಿ ಹಿಂದೂ ರುದ್ರ ಭೂಮಿಯ ರಚನೆಯ ಕಾರ್ಯಕ್ಕೆ ಕಳೆದ ಮೂರು ವರ್ಷಗಳ ಹಿಂದೆ ಶಾಸಕ ಹರೀಶ್ ಪೂಂಜಾ ಶಿಲನ್ಯಾಸ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ರುದ್ರಭೂಮಿ ಅನ್ನುವುದು ಕೇವಲ ಸ್ಮಶಾನ ಅಲ್ಲ. ಹೆಣಸುಡುವುದಕ್ಕೆ ಮಾತ್ರ ಸೀಮಿತವಾಗದೆ ಹಿಂದೂ ಧರ್ಮದ ಶ್ರದ್ಧಾ, ಮೋಕ್ಷ ಪುಣ್ಯ ಧಾಮ ಕೇಂದ್ರವಾಗಿ ನಿರ್ಮಾಣ ಮಾಡುವುದಾಗಿ ಗ್ರಾಮಸ್ಥರ ಅಭಿಪ್ರಾಯವಾಗಿದೆ. ಮಾತ್ರವಲ್ಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶವ ಸುಡುವ ಸ್ಟೀಮರ್, ಶವಾಗಾರಕ್ಕೆ ನೀಡಲಾಗಿದೆ. ಕಳಿಯ ಗ್ರಾಮ ಪಂಚಾಯತ್ ನರೇಗಾ ಯೋಜನೆಯಡಿ ಅನುದಾನ ಕಟ್ಟಡ ರಚನೆ, ಎರಡು ಕೊಠಡಿ ಅಂದಾಜು 4 ಲಕ್ಷ ರೂಪಾಯಿ ಅನುದಾನ ಶಾಸಕರ ನಿಧಿ,ಸ್ಮಶಾನದ ಹೆಬ್ಬಾಗಿಲನ್ನು ಕಳಿಯ ಸಿ.ಎ.ಬ್ಯಾಂಕು ಮತ್ತು ದಾನಿ ಸಹಕಾರದಿಂದ ಸುಮಾರು 25 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಕೇಶವ ಬಂಗೇರ ಬಿ.ತಿಳಿಸಿದ್ದಾರೆ.

Related posts

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya
error: Content is protected !!