27.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

ಬೆಳ್ತಂಗಡಿ: ಧರ್ಮಸ್ಥಳದ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಪಂಜಾಬ್ ನ ಜಲಂದರ್ ನಲ್ಲಿರುವ ಕಾಲೇಜಿನಲ್ಲಿ ಮೇ 18ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿಗಳ ಪುತ್ರಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಎಸ್ ನಾಯರ್ (22) ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ನಿಗೂಢವಾಗಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿ ಕಾಲೇಜು ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದರೆ ಸತ್ಯಾಸತ್ಯತೆಯು ಬಯಲಿಗೆ ಬರಲಿದೆ.

ಅಲ್ಲಿನ ಸ್ಥಳೀಯ ಪೊಲೀಸರು ಆಕಾಂಕ್ಷ ಕುಟುಂಬದ ದೂರನ್ನು ಠಾಣೆಯಲ್ಲಿ ಸ್ವೀಕರಿಸದೇ, ಪೊಲೀಸರೇ ಬೇರೆ ದೂರು ದಾಖಲಿಸಿಕೊಂಡು ವಂಚಿಸಲು ಯತ್ನಿಸಿದ್ದರು. ಈ ಹಿನ್ನಲೆಯಲ್ಲಿ ಆಕಾಂಕ್ಷ ಕುಟುಂಬ ಮೇಲಾಧಿಕಾರಿಗಳಿಗೆ ದೂರು ನೀಡಿತ್ತು. ಇದೀಗ ಪ್ರಕರಣದ ಆರೋಪಿ ಬಿಜಿಲ್ ಮ್ಯಾಥ್ಯೂ ಎಂಬನನ್ನು ಬಂಧಿಸಲಾಗಿದೆ ಎಂದು ವರದಿ ಆಗಿದೆ. ರಾಜ್ಯ ಸರ್ಕಾರವು ಪಂಜಾಬ್ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಹಾಗೂ ಪರಿಹಾರ ನೀಡಬೇಕು ಎಂದು ಅಕ್ಬರ್ ಬೆಳ್ತಂಗಡಿ ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya
error: Content is protected !!