23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

ಬೆಳ್ತಂಗಡಿ: ಧರ್ಮಸ್ಥಳದ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಪಂಜಾಬ್ ನ ಜಲಂದರ್ ನಲ್ಲಿರುವ ಕಾಲೇಜಿನಲ್ಲಿ ಮೇ 18ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿಗಳ ಪುತ್ರಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಎಸ್ ನಾಯರ್ (22) ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ನಿಗೂಢವಾಗಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿ ಕಾಲೇಜು ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದರೆ ಸತ್ಯಾಸತ್ಯತೆಯು ಬಯಲಿಗೆ ಬರಲಿದೆ.

ಅಲ್ಲಿನ ಸ್ಥಳೀಯ ಪೊಲೀಸರು ಆಕಾಂಕ್ಷ ಕುಟುಂಬದ ದೂರನ್ನು ಠಾಣೆಯಲ್ಲಿ ಸ್ವೀಕರಿಸದೇ, ಪೊಲೀಸರೇ ಬೇರೆ ದೂರು ದಾಖಲಿಸಿಕೊಂಡು ವಂಚಿಸಲು ಯತ್ನಿಸಿದ್ದರು. ಈ ಹಿನ್ನಲೆಯಲ್ಲಿ ಆಕಾಂಕ್ಷ ಕುಟುಂಬ ಮೇಲಾಧಿಕಾರಿಗಳಿಗೆ ದೂರು ನೀಡಿತ್ತು. ಇದೀಗ ಪ್ರಕರಣದ ಆರೋಪಿ ಬಿಜಿಲ್ ಮ್ಯಾಥ್ಯೂ ಎಂಬನನ್ನು ಬಂಧಿಸಲಾಗಿದೆ ಎಂದು ವರದಿ ಆಗಿದೆ. ರಾಜ್ಯ ಸರ್ಕಾರವು ಪಂಜಾಬ್ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಹಾಗೂ ಪರಿಹಾರ ನೀಡಬೇಕು ಎಂದು ಅಕ್ಬರ್ ಬೆಳ್ತಂಗಡಿ ಆಗ್ರಹಿಸಿದ್ದಾರೆ.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya
error: Content is protected !!