25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

ಗೇರುಕಟ್ಟೆ : ಮೇ.20 ಸಂಜೆ 6ಕ್ಕೆ ವಾಸ್ತು ಪೂಜೆ ಮತ್ತು ರಕ್ಷಾ ಪೂಜೆ ನಡೆಯಿತು.
ಮೇ.21ಸಂಜೆ 5 ಕ್ಕೆ ಮೋಕ್ಷಧಾಮ ಲೋಕಾರ್ಪಣೆ ಹಾಗೂ ಸಂಜೆ
ಸಭಾ ಕಾರ್ಯಕ್ರಮ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ .
ಕಳಿಯ, ನ್ಯಾಯತರ್ಪ್ಪು ಗ್ರಾಮ ವ್ಯಾಪ್ತಿಯನ್ನು ಗುರಿಯಾಗಿಸಿ ಕೊಂಡು ಸರಕಾರದ ಅಧೀನದಲ್ಲಿ ಮಂಜೂರಾದ ಅಂದಾಜು 0.55 ಸೆಂಟ್ಸ್ ಜಾಗದಲ್ಲಿ ಸುಮಾರು 25 ಲಕ್ಷದಲ್ಲಿ ವೆಚ್ಚದಲ್ಲಿ ಹಿಂದೂ ರುದ್ರ ಭೂಮಿಯ ರಚನೆಯ ಕಾರ್ಯಕ್ಕೆ ಕಳೆದ ಮೂರು ವರ್ಷಗಳ ಹಿಂದೆ ಶಾಸಕ ಹರೀಶ್ ಪೂಂಜಾ ಶಿಲನ್ಯಾಸ ನೆರವೇರಿಸುವ ಮೂಲಕ ಚಾಲನೆ ನೀಡಿದರು.ರುದ್ರಭೂಮಿ ಅನ್ನುವುದು ಕೇವಲ ಸ್ಮಶಾನ ಅಲ್ಲ.ಹೆಣಸುಡುವುದಕ್ಕೆ ಮಾತ್ರ ಸೀಮಿತವಾಗದೆ ಹಿಂದೂ ಧರ್ಮದ ಶ್ರದ್ಧಾ,ಮೋಕ್ಷ ಪುಣ್ಯ ಧಾಮ ಕೇಂದ್ರವಾಗಿ ನಿರ್ಮಾಣ ಮಾಡುವುದಾಗಿ ಗ್ರಾಮಸ್ಥರ ಅಭಿಪ್ರಾಯವಾಗಿದೆ.ಮಾತ್ರವಲ್ಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶವ ಸುಡುವ ಸ್ಟೀಮರ್, ಶವಾಗಾರಕ್ಕೆ ನೀಡಿದರು. ಕಳಿಯ ಗ್ರಾಮ ಪಂಚಾಯತ್ ನರೇಗದ ಅನುದಾನ ಕಟ್ಟಡ ರಚನೆ, ಎರಡು ಕೊಠಡಿ ಅಂದಾಜು 4 ಲಕ್ಷ ರೂಪಾಯಿ ಅನುದಾನ ಶಾಸಕರ ನಿಧಿ,ಸ್ಮಶಾನದ ಹೆಬ್ಬಾಗಿಲನ್ನು ಕಳಿಯ ಸಿ.ಎ.ಬ್ಯಾಂಕು ಮತ್ತು ದಾನಿ ಸಹಕಾರದಿಂದ ಸುಮಾರು 25 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು
ಹಿಂದೂ ರುದ್ರಭೂಮಿ ಸೇವಾ ಸಮಿತಿ ಕಳಿಯ,ನ್ಯಾಯತರ್ಪ್ಪು.ಅಧ್ಯಕ್ಷರಾದ ಕೇಶವ ಬಂಗೇರ ಬಿ.ಹೇಳಿದರು.
ಉಪಾಧ್ಯಕ್ಷರುಗಳಾದ ಸತೀಶ್ ಶೆಟ್ಟಿ, ನೆಲ್ಲಿಕಟ್ಟೆ.ಉಮೇಶ್ ಶೆಟ್ಟಿ, ಸಂಬೋಳ್ಯ, ಉಮೇಶ್ ಕೇಲ್ದಡ್ಕ,ಪ್ರಕಾಶ್ ಮೇರ್ಲ ಕಾರ್ಯದರ್ಶಿ: ಲೋಕೇಶ್ ಕುಮಾರ್ ಎನ್., ಜೊತೆ ಕಾರ್ಯದರ್ಶಿ ಸತೀಶ್ ಭಂಡಾರಿನಾಳ., ರಂಜನ್ ಹೆಚ್. ಕೋಶಾಧಿಕಾರಿ ಶೇಖರ್ ನ್ಯಾಕ, ಗೇರುಕಟ್ಟೆ ಪ್ರಧಾನ ಸಂಚಾಲಕರಾದ ಕರುಣಾಕರ ಶೆಟ್ಟಿ ಕೊರಂಜ.,ಸಂಚಾಲಕರು ವಸಂತ ಶೆಟ್ಟಿ, ಮಾವಿನಕಟ್ಟೆ,ಬಾಲಕೃಷ್ಣ ಗೌಡ, ಬಿರ್ಮೊಟ್ಟುಸಾಮಾಜಿಕ ಜಾಲತಾಣ ಪುರಂದರ ಗೇರುಕಟ್ಟೆ ಉಪಸ್ಥಿತರಿದ್ದರು.
ಮೇ.21ರಂದು ಉದ್ಘಾಟನಾ ಸಮಾರಂಭದಲ್ಲಿ ಹರೀಶ್ ಪೂಂಜ
ಶಾಸಕರು,ದಿವಾಕರ ಎಂ.ಅಧ್ಯಕ್ಷರು, ಗ್ರಾಮ ಪಂಚಾಯತ್ ಕಳಿಯ,
ಕ್ಯಾ। ಬ್ರಿಜೇಶ್ ಚೌಟ ಸಂಸದರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ., ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಸರಕಾರ., ಕಿಶೋರ್ ಕುಮಾರ್ ಬೊಟ್ಯಾಡಿ,ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಸರಕಾರ.,ಕೆ. ಹರೀಶ್ ಕುಮಾರ್ ಮಾಜಿ ಶಾಸಕರು ವಿಧಾನ ಪರಿಷತ್ & ಜಿಲ್ಲಾಧ್ಯಕ್ಷರು ದ.ಕಜಿಲ್ಲಾ ಕಾಂಗ್ರೆಸ್ ಸಮಿತಿ., ರಕ್ಷಿತ್ ಶಿವರಾಮ್ ಅಧ್ಯಕ್ಷರು, ಬೆಸ್ಟ್ ಪೌಂಡೇಶನ್, ಬೆಳ್ತಂಗಡಿ.,ವಸಂತ ಮಜಲುಅಧ್ಯಕ್ಷರು, ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ., ಕಿರಣ್ ಚಂದ್ರ ಡಿ. ಪುಷ್ಪಗಿರಿ ಧಾರ್ಮಿಕ ಮುಖಂಡರು, ಬೆಳ್ತಂಗಡಿ.,
ಜಾನ್ ಸುರೇಶ್ ಜೆ.ಎಂ.ಜೆ. ಕನ್‌ಕ್ಷನ್ & ಪೈನಾನ್ಸ್, ಮಂಗಳೂರು.,
ಯಶೋಧರ, ಯೋಜನಾಧಿಕಾರಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ.,ಸಂತೋಷ್ ಪಾಟೀಲ್,ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಕಳಿಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಕಳಿಯ, ನ್ಯಾಯತರ್ಪ್ಪು ಗ್ರಾಮಸ್ಥರು ಉಪಸ್ಥಿತರಿರುವರು ಎಂದು ಹಿಂದೂ ರುದ್ರಭೂಮಿ ಸೇವಾ ಸಮಿತಿ ಅಧ್ಯಕ್ಷ ಕೇಶವ ಬಂಗೇರ ಬಿ.ಗೇರುಕಟ್ಟೆ ತಿಳಿಸಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!