24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya
error: Content is protected !!