23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!