24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya
error: Content is protected !!