30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya
error: Content is protected !!