23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

ಬೆಳ್ತಂಗಡಿ: ತೆಕ್ಕಾರು ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಡೀಸೆಲ್ ಕದ್ದ, ಟ್ಯೂಬ್ ಲೈಟ್ ಹೊಡೆದ ಕಂಟ್ರಿ ಬ್ಯಾರಿಗಳು ಎಂದು ಹರೀಶ್ ಪೂಂಜ ಹೇಳಿಕೆಗೆ ದಾಖಲಾಗಿರುವ ಎಫ್ ಐ ಆರ್ ಮತ್ತು ನಂತರ ಕಾನೂನು ಪ್ರಕ್ರಿಯೆಯನ್ನು ರದ್ದು ಮಾಡುವಂತೆ ಕೋರಿ ಹರೀಶ್ ಪೂಂಜ ರವರು ಸಲ್ಲಿಸಿದ ಅರ್ಜಿ ವಿಚಾರಣೆಗೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.


ಕೋಮು ದ್ವೇಷದ ಭಾಷಣ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲಾಗಿತ್ತು. ಈ ದೂರನ್ನು ರದ್ದುಗೊಳಿಸಬೇಕೆಂದು ಹರೀಶ್ ಪೂಂಜ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಅರ್ಜಿ ವಿಚಾರಣೆಗೆ ಬಂದಿದ್ದು, ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನ ಮುಂದೂಡಿ ಜನಪ್ರತಿನಿಧಿ ನ್ಯಾಯಾಲಯ ಆದೇಶಿಸಿದೆ.


ವಾದ-ಪ್ರತಿವಾದ ಆಲಿಸಿದ ಕೋರ್ಟ್, ಹರೀಶ್ ಪೂಂಜಾ ವಿರುದ್ಧ ಕೋಮು ದ್ವೇಷ ಆರೋಪಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ, ಜೂ.18ಕ್ಕೆ ವಿಚಾರಣೆ ಮುಂದೂಡಿತು.
ಹರೀಶ್ ಪೂಂಜರ ಪರವಾಗಿ ವಕೀಲರಾದ ಪ್ರಸನ್ನ ದೇಶಪಾಂಡೆ ಹಾಗೂ ರೋಹಿತ್ ಗೌಡ ವಾದಿಸಿದರು.

Related posts

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!