September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

ಬೆಳ್ತಂಗಡಿ: ತೆಕ್ಕಾರು ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಡೀಸೆಲ್ ಕದ್ದ, ಟ್ಯೂಬ್ ಲೈಟ್ ಹೊಡೆದ ಕಂಟ್ರಿ ಬ್ಯಾರಿಗಳು ಎಂದು ಹರೀಶ್ ಪೂಂಜ ಹೇಳಿಕೆಗೆ ದಾಖಲಾಗಿರುವ ಎಫ್ ಐ ಆರ್ ಮತ್ತು ನಂತರ ಕಾನೂನು ಪ್ರಕ್ರಿಯೆಯನ್ನು ರದ್ದು ಮಾಡುವಂತೆ ಕೋರಿ ಹರೀಶ್ ಪೂಂಜ ರವರು ಸಲ್ಲಿಸಿದ ಅರ್ಜಿ ವಿಚಾರಣೆಗೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.


ಕೋಮು ದ್ವೇಷದ ಭಾಷಣ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲಾಗಿತ್ತು. ಈ ದೂರನ್ನು ರದ್ದುಗೊಳಿಸಬೇಕೆಂದು ಹರೀಶ್ ಪೂಂಜ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಅರ್ಜಿ ವಿಚಾರಣೆಗೆ ಬಂದಿದ್ದು, ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನ ಮುಂದೂಡಿ ಜನಪ್ರತಿನಿಧಿ ನ್ಯಾಯಾಲಯ ಆದೇಶಿಸಿದೆ.


ವಾದ-ಪ್ರತಿವಾದ ಆಲಿಸಿದ ಕೋರ್ಟ್, ಹರೀಶ್ ಪೂಂಜಾ ವಿರುದ್ಧ ಕೋಮು ದ್ವೇಷ ಆರೋಪಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿ, ಜೂ.18ಕ್ಕೆ ವಿಚಾರಣೆ ಮುಂದೂಡಿತು.
ಹರೀಶ್ ಪೂಂಜರ ಪರವಾಗಿ ವಕೀಲರಾದ ಪ್ರಸನ್ನ ದೇಶಪಾಂಡೆ ಹಾಗೂ ರೋಹಿತ್ ಗೌಡ ವಾದಿಸಿದರು.

Related posts

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಮುಂಡಾಜೆ: 36 ವರ್ಷಗಳ ಸಾರ್ಥಕ ಸೇವೆಯ ಬಳಿಕ ಶಿಕ್ಷಕಿ ಜಯಂತಿ ಟಿ. ವಯೋನಿವೃತ್ತಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya
error: Content is protected !!