ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

ಪುತ್ತೂರು: ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ವನ್ನು ಕಾಲೇಜಿನ ಸ್ಪಂದನ ಸಭಾಂಗಣ ದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ|| ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡುತ್ತಾ “ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯ ಮೂಡಿಸುವುದು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಧ್ಯೇಯವಾಗಿದೆ. ವಿದ್ಯರ‍್ಥಿಗಳು ಹಿಂಸಾತ್ಮಕ ಚಟುವಟಿಕೆಗಳನ್ನು ಬೆಂಬಲಿಸದೆ ರಾಷ್ಟ್ರದ ಅಭ್ಯುದಯದತ್ತ ಗಮನವೀಯಬೇಕು. ಕ್ರೌರ್ಯತೆಗೆ ಯಾವುದೇ ಜಾತಿ, ಧರ್ಮ ಗಳ ಹಂಗಿಲ್ಲ. ವಿವೇಕದ ಅರಿವು ನಮ್ಮಲ್ಲಿ ಜಾಗೃತವಾದಾಗ ಮಾತ್ರ ಭಯೋತ್ಪಾದನೆಯ ನಿರ್ಮೂಲನೆ ಸಾಧ್ಯ.”ಎಂದು ನುಡಿದರು.

ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಕಾರ್‍ಯಕ್ರಮವನ್ನುಅರ್ಥಪೂರ್ಣವಾಗಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ||ರಾಧಾಕೃಷ್ಣ ಗೌಡ ಅವರು ಸ್ವಾಗತಿಸಿ, ಕಾಲೇಜಿನ ಯಕ್ಷಕಲಾ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!