25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

ಪುತ್ತೂರು: ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ವನ್ನು ಕಾಲೇಜಿನ ಸ್ಪಂದನ ಸಭಾಂಗಣ ದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ|| ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡುತ್ತಾ “ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯ ಮೂಡಿಸುವುದು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಧ್ಯೇಯವಾಗಿದೆ. ವಿದ್ಯರ‍್ಥಿಗಳು ಹಿಂಸಾತ್ಮಕ ಚಟುವಟಿಕೆಗಳನ್ನು ಬೆಂಬಲಿಸದೆ ರಾಷ್ಟ್ರದ ಅಭ್ಯುದಯದತ್ತ ಗಮನವೀಯಬೇಕು. ಕ್ರೌರ್ಯತೆಗೆ ಯಾವುದೇ ಜಾತಿ, ಧರ್ಮ ಗಳ ಹಂಗಿಲ್ಲ. ವಿವೇಕದ ಅರಿವು ನಮ್ಮಲ್ಲಿ ಜಾಗೃತವಾದಾಗ ಮಾತ್ರ ಭಯೋತ್ಪಾದನೆಯ ನಿರ್ಮೂಲನೆ ಸಾಧ್ಯ.”ಎಂದು ನುಡಿದರು.

ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಕಾರ್‍ಯಕ್ರಮವನ್ನುಅರ್ಥಪೂರ್ಣವಾಗಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ||ರಾಧಾಕೃಷ್ಣ ಗೌಡ ಅವರು ಸ್ವಾಗತಿಸಿ, ಕಾಲೇಜಿನ ಯಕ್ಷಕಲಾ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!