September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya
error: Content is protected !!