24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya
error: Content is protected !!