25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!