July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ

ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಅರುಣ್ ರವರ ಸಹೋದರ ಸುನಿಲ್ ಕುಮಾ‌ರ್ ಪೊಲೀಸರಿಗೆ ದೂರು ನೀಡಿದ್ದು, ಮೂಲತಃ ಕೇರಳ ರಾಜ್ಯದ ಕಾಸರಗೋಡು ನೀರ್ಚಾಲ್‌ ಗ್ರಾಮದ ನಿವಾಸಿಯಾಗಿರುವ ಇವರುಗಳು ಇಳಂತಿಲ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಇಳಂತಿಲದಲ್ಲೇ ತಾತ್ಕಾಲಿಕ ವಾಸ್ತವ್ಯವನ್ನು ಹೊಂದಿದ್ದರು. ಮೇ 1 ರಂದು ತನಗೆ ಹೊಟ್ಟೆ ನೋವಿದೆಂದು ತಿಳಿಸಿ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ಹಿಂದಿರುಗಿ ಬಂದಿಲ್ಲ. ಈ ಕುರಿತು ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!