25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

ಚಾರ್ಮಾಡಿ: ದ.ಕ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಸಮೀಪದವರೆಗೆ ತೆರಳಿದರು. ಈ ವೇಳೆ ಸಲಗದ ರೋಷವನ್ನು ವ್ಯಕ್ತಪಡಿಸಿತು. ಇದರಿಂದ ಅನೇಕ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳ ಸಂಚಾರ ಸ್ಥಗಿತಗೊಂಡಿತು.

ಕಾಡಾನೆ ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ.ಪರಿಸರ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವನ್ಯಜೀವಿಗಳು ಮಾನವ ಸಂಪರ್ಕದಿಂದ ತೀವ್ರ ಒತ್ತಡಕ್ಕೆ ಒಳಗಾಗುತ್ತವೆ. ಈ ತರಹದ ವರ್ತನೆ ಮುಂದಿನ ದಿನಗಳಲ್ಲಿ ದುರಂತಗಳಿಗೆ ದಾರಿಯಾಗಬಹುದು ಎಂದು ಎಚ್ಚರಿಸಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!