23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥಶ್ರೀ ಪಾದಂಗಳವರು ಇತ್ತೀಚೆಗೆ ಭೇಟಿ ನೀಡಿದರು. ಸ್ವಾಮೀಜಿಯವರು ದೇವರಿಗೆ ವಿಶೇಷ ಮಂಗಳಾರತಿ ಮಾಡಿ ಬಳಿಕ ಆಶೀರ್ವಚನ ನೀಡಿದರು. ದೇವಸ್ಥಾನದ ಸಮಿತಿ ವತಿಯಿಂದ ಇವರನ್ನು ಭವ್ಯ ಸ್ವಾಗತಿಸಲಾಯಿತು.

ದೇವಸ್ಥಾನದ ಆಡಳಿತ ಮೊಕ್ತಸರ ಜೀವಂದರ ಜೈನ್ ಬೆಳಾಲು ಗುತ್ತು, ಅಸ್ರನ್ನ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಕೊಲ್ಪಾಡಿ ರಾಜರಾಮ ಶರ್ಮ, ಗಿರಿರಾಜ ಬಾರಿತ್ತಾಯ ಮಾಚಾರು, ಬೆಳಾಲು ಗ್ರಾಮ ಪಂಚಾಯತ್‌ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ, ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಎಳ್ಳುಗದ್ದೆ, ಮಹಿಳಾ ಸಮಿತಿಯ ಸಂಚಾಲಕಿ ಹೇಮಲತಾ ಶ್ರೀನಿವಾಸ ಗೌಡ, ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಪೊಸೊಟ್ಟು, ನಿಕಟ ಪೂರ್ವ ಅಧ್ಯಕ್ಷ ನವೀನ, ಸದಸ್ಯರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಬೈಲುವಾರು ಸಮಿತಿಯ ಪ್ರದಾನ ಸಂಚಾಲಕರು, ಸಂಚಾಲಕರು ಊರವರು, ಭಕ್ತರು ಹಾಜರಿದ್ದರು.

Related posts

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya
error: Content is protected !!